ಹುಬ್ಬಳ್ಳಿ: ಕಥೆಗಾರ, ಸಾಹಿತಿ ಡಾ. ಬಸವರಾಜ ಸಾದರ ಅವರ ‘ಬುದ್ಧನ ಭಿಕ್ಷಾಪಾತ್ರೆ’ ಕೃತಿಯು ಡಾ. ಡಿ.ಎಸ್. ಕರ್ಕಿ ಕಾವ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ.
‘ಪ್ರಶಸ್ತಿಯು ₹10 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಇಲ್ಲಿಯ ಕರ್ಕಿ ಭವನದಲ್ಲಿ ಡಿ.4ರಂದು ನಡೆಯಲಿದೆ‘
ಎಂದು ವೇದಿಕೆಯ ಕಾರ್ಯದರ್ಶಿ ಎಂ.ಎ. ಸುಬ್ರಹ್ಮಣ್ಯ ಮತ್ತು ಬಿ.ಎಸ್. ಮಾಳವಾಡ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.