ADVERTISEMENT

ಕರ್ನಾಟಕ ಬಂದ್‌: ಸ್ತಬ್ಧಗೊಂಡ ಬೆಂಗಳೂರು

​ಪ್ರಜಾವಾಣಿ ವಾರ್ತೆ
Published 30 ಜುಲೈ 2016, 11:51 IST
Last Updated 30 ಜುಲೈ 2016, 11:51 IST
ಕರ್ನಾಟಕ ಬಂದ್‌: ಸ್ತಬ್ಧಗೊಂಡ ಬೆಂಗಳೂರು
ಕರ್ನಾಟಕ ಬಂದ್‌: ಸ್ತಬ್ಧಗೊಂಡ ಬೆಂಗಳೂರು   

ಬೆಂಗಳೂರು: ಮಹಾದಾಯಿ ನ್ಯಾಯಮಂಡಳಿಯ ಮಧ್ಯಂತರ ಆದೇಶ ವಿರೋಧಿಸಿ ಶನಿವಾರ ನಡೆದ ಕರ್ನಾಟಕ ಬಂದ್‌ನಿಂದಾಗಿ ರಾಜಧಾನಿ ಬೆಂಗಳೂರು ಸ್ತಬ್ಧಗೊಂಡಿತ್ತು.

ನಗರದ ರಸ್ತೆಗಳಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಕೆಲ ರಸ್ತೆಗಳಲ್ಲಿ ಕನ್ನಡಪರ ಸಂಘಟನೆಗಳ ಸದಸ್ಯರು ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಬಿಎಂಟಿಸಿ, ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳು ರಸ್ತೆಗಿಳಿಯಲಿಲ್ಲ. ಆ್ಯಪ್‌ ಆಧಾರಿತ ಓಲಾ, ಉಬರ್‌ ಟ್ಯಾಕ್ಸಿಗಳ ಸಂಚಾರವೂ ವಿರಳವಾಗಿತ್ತು.

ADVERTISEMENT

ಬಹುತೇಕ ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದರೆ ಖಾಲಿಯಾಗಿದ್ದ ರಸ್ತೆ, ಬಸ್‌ ನಿಲ್ದಾಣಗಳಲ್ಲಿ ಮಕ್ಕಳು, ಯುವಕರು ಕ್ರಿಕೆಟ್‌ ಆಡುತ್ತಿದ್ದ ದೃಶ್ಯ ಕಂಡು ಬಂತು.

</p></p>

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.