ADVERTISEMENT

ಕಲಬುರ್ಗಿಯಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 23 ಜುಲೈ 2017, 12:52 IST
Last Updated 23 ಜುಲೈ 2017, 12:52 IST
ಮಹಮ್ಮದ್ ಇಲಿಯಾಸ್
ಮಹಮ್ಮದ್ ಇಲಿಯಾಸ್   

ಕಲಬುರ್ಗಿ: ಇಲ್ಲಿನ ಮಿಜಬಾ ನಗರದಲ್ಲಿ ದುಷ್ಕರ್ಮಿಗಳ ಗುಂಪೊಂದು ಭಾನುವಾರ ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ್ದಾರೆ.
ಎಂಎಸ್ ಕೆ ಮಿಲ್ ನಿವಾಸಿ ಮಹಮ್ಮದ್ ಇಲಿಯಾಸ್ ಮೃತಪಟ್ಟವರು.ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್ ವಿಪಿ ವೃತ್ತದಲ್ಲಿ ಶವವಿಟ್ಟು ಪ್ರತಿಭಟನೆ
ಮಹಮ್ಮದ್ ಇಲಿಯಾಸ್ ಕೊಲೆ‌ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ಇಲ್ಲಿನ ಎಸ್ ವಿಪಿ ವೃತ್ತದಲ್ಲಿ ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ. ವೃತ್ತದ ಸುತ್ತಲಿನ ಅಂಗಡಿ ಮುಂಗಟ್ಟು ಬಂದ್ ಮಾಡಿಸಿ ಪ್ರತಿಭಟನೆ ನಡೆಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣವಾಗಿದೆ. 

ಸ್ಥಳಕ್ಕೆ ಎಸ್.ಪಿ ಶಶಿಕುಮಾರ್ ಭೇಟಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.