ಬೆಂಗಳೂರು: ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಅಂತ್ಯಸಂಸ್ಕಾರ ಇದೇ ಗುರುವಾರ (ಡಿ. 26) ಬೆಂಗಳೂರು ವಿಶ್ವವಿದ್ಯಾಲಯದ ಬಳಿಯ ಕಲಾಗ್ರಾಮದಲ್ಲಿ ನಡೆಯಲಿದೆ.
ಅಂತಿಮ ದರ್ಶನ: ಅಂತ್ಯಸಂಸ್ಕಾರಕ್ಕೂ ಮುನ್ನ ನಗರದ ಮೂರು ಕಡೆಗಳಲ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 8ರಿಂದ 8.30ರವರೆಗೆ ಬನಶಂಕರಿಯಲ್ಲಿರುವ ಅವರ ಮನೆ ‘ಚೈತ್ರ’ದಲ್ಲಿ, 9.30ರಿಂದ 10ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣ ಮತ್ತು 10.30ರಿಂದ 2ರವರೆಗೆ ಜೆ.ಸಿ.ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಸಾರ್ವಜನಿಕರು ದರ್ಶನ ಪಡೆಯಬಹುದಾಗಿದೆ.
ಸಂಜೆ 4.30ಕ್ಕೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಯಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.