ADVERTISEMENT

ಕಾರಾಗೃಹದಲ್ಲಿ ಐಷಾರಾಮಿ ಜೀವನ ನಡೆಸಲು ಅವಕಾಶವಿಲ್ಲ: ಸಚಿವ ರಮೇಶ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 18 ಜುಲೈ 2017, 11:58 IST
Last Updated 18 ಜುಲೈ 2017, 11:58 IST
ಶಶಿಕಲಾಗೆ ಅಡುಗೆಗಾಗಿ ಮೀಸಲಿಟ್ಟ ಕೊಠಡಿ
ಶಶಿಕಲಾಗೆ ಅಡುಗೆಗಾಗಿ ಮೀಸಲಿಟ್ಟ ಕೊಠಡಿ   

ಕೋಲಾರ: ‘ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಲೋಪ ಆಗಿದೆ. ಅಲ್ಲಿ ಎಲ್ಲಾ ವ್ಯವಸ್ಥೆ ಸರಿಯಿಲ್ಲ. ನ್ಯಾಯಯುತ ತನಿಖೆ ದೃಷ್ಟಿಯಿಂದ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಆರ್.ರಮೇಶ್‌ಕುಮಾರ್ ಹೇಳಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದಕ್ಷ ಅಧಿಕಾರಿಗಳು ಎಂದರೆ ಸರ್ವಾಧಿಕಾರಿಗಳಲ್ಲ. ಅವರು ಅಧಿಕಾರಿಗಳೇ. ಐಪಿಎಸ್ ಅಧಿಕಾರಿಗಳಾಗಿ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದು ಸರಿಯಲ್ಲ’ ಎಂದು ಡಿಜಿಪಿ ಸತ್ಯನಾರಾಯಣರಾವ್‌ ಮತ್ತು ಡಿಐಜಿ ರೂಪಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಪರಪ್ಪನ ಅಗ್ರಹಾರ ಕಾರಾಗೃಹದ ಕೈದಿಗಳಿಗೆ ಐಷಾರಾಮಿ ಜೀವನ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂಬುದು ತಪ್ಪು ಕಲ್ಪನೆ. ಕಾರಾಗೃಹ ಪ್ರಕರಣ ಇನ್ನು ತನಿಖೆ ಹಂತದಲ್ಲಿದೆ. ಹೀಗಾಗಿ ಆ ಬಗ್ಗೆ ಹೆಚ್ಚು ಮಾತನಾಡುವುದು ಸರಿಯಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.