ಬೆಂಗಳೂರು: ನಾಟಕ ರಚನೆಕಾರ, ನಟ ಗಿರೀಶ್ ಕಾರ್ನಾಡ್ ಅವರಿಗೆ ಟಾಟಾ ಸಾಹಿತ್ಯ ಜೀವಮಾನ ಪ್ರಶಸ್ತಿ ಘೋಷಿಸಲಾಗಿದೆ.
ಮುಂಬೈನಲ್ಲಿರುವ ಪ್ರದರ್ಶನ ಕಲೆಗಳ ರಾಷ್ಟ್ರೀಯ ಕೇಂದ್ರದಲ್ಲಿ ನ.19ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಭಾರತೀಯ ಸಾಹಿತ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಮಹತ್ವದ ಕೊಡುಗೆಗಾಗಿ ಈ ಪ್ರಶಸ್ತಿ ನೀಡಲಾಗುತ್ತದೆ.
ಈ ಕುರಿತು ಪ್ರತಿಕ್ರಿಯಿಸಿದ ಗಿರೀಶ್ ಕಾರ್ನಾಡ್, ‘ನಾಟಕ ರಚನೆಕಾರನಾದ ನನಗೆ ಟಾಟಾ ಸಾಹಿತ್ಯ ಪ್ರಶಸ್ತಿ ಸಿಕ್ಕಿರುವುದು ಗೌರವ ತಂದಿದೆ. ಇದಕ್ಕಿಂತ ಹೆಚ್ಚಿನದು ಇನ್ನೇನು ಬಯಸಲಿ. ನಾಟಕಕಾರನ ಜೀವನದಲ್ಲಿ ಇದು ಅಮೂಲ್ಯ ಕ್ಷಣ’ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.