ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ದೀಪಕ್ಕೆ ಮಿಶ್ರಾ ಮತ್ತು ಉದಯ ಲಲಿತ್ ನ್ಯಾಯಪೀಠದ ಬದಲಾವಣೆಗೆ ಆಗ್ರಹಿಸಿ ರಾಜ್ಯ ವಕೀಲರ ಸಂಘಗಳ ಒಕ್ಕೂಟ ಗುರುವಾರ ಹೈಕೋರ್ಟ್ ಆವರಣದಲ್ಲಿ ಪ್ರತಿಭಟನೆ ನಡೆಸಿತು.
ಒಕ್ಕೂಟದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ ನೇತೃತ್ವದಲ್ಲಿ ವಕೀಲರು ಘೋಷಣೆ ಕೂಗಿ ಪೀಠ ಬದಲಾವಣೆಗೆ ಮುಖ್ಯ ನ್ಯಾಯಮೂರ್ತಿ ಠಾಕೂರ್ ಕೂಡಲೇ ಗಮನ ಹರಿಸಬೇಕು ಎಂದರು.
ಪರಿಸ್ಥಿತಿ ಹೀಗೆಯೇ ಮುಂದುವರಿದರೆ ನಮಗೆ ನ್ಯಾಯ ಸಿಗುವುದಿಲ್ಲ ಆಗಾಗಿ ನ್ಯಾಯಪೀಠವನ್ನು ಬದಲಾವಣೆ ಮಾಡಬೇಕು ಎಂದು ಸುಬ್ಬಾರೆಡ್ಡಿ ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.