ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು 2014ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಸೋಮವಾರದಿಂದ (ಫೆ.20) ವ್ಯಕ್ತಿತ್ವ ಪರೀಕ್ಷೆ ನಡೆಸಲಿದೆ.
ಅಭ್ಯರ್ಥಿಗಳು ಆಧಾರ್ ಸಂಖ್ಯೆಯನ್ನು (ಕಾರ್ಡ್) ಪರಿಶೀಲನೆ ಸಂದರ್ಭದಲ್ಲಿ ಹಾಜರುಪಡಿಸಬೇಕು. ಸ್ವವಿವರದ ನಮೂನೆಯನ್ನು ಆಯೋಗದ ವೆಬ್ಸೈಟ್ನಿಂದ ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಲ್ಲಿಸಬೇಕು.
ಸಂದರ್ಶನಕ್ಕೂ ಮುನ್ನ ಅಭ್ಯರ್ಥಿಗಳ ಬಯೊಮೆಟ್ರಿಕ್ ಹಾಜರಾತಿ ತೆಗೆದುಕೊಳ್ಳುವುದರಿಂದ ನಿಗದಿತ ಸಮಯಕ್ಕಿಂತ 30 ನಿಮಿಷಗಳ ಮುಂಚಿತವಾಗಿ ಹಾಜರಿರಬೇಕು ಎಂದು ಪ್ರಕಟಣೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.