ADVERTISEMENT

ಕೆಪಿಎಸ್‌ಸಿ ಸದಸ್ಯರ ನೇಮಕಕ್ಕೆ ಆದೇಶ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2015, 19:30 IST
Last Updated 27 ಮಾರ್ಚ್ 2015, 19:30 IST

ಬೆಂಗಳೂರು: ನಾಲ್ಕು ಮಂದಿಯನ್ನು ಕರ್ನಾಟಕ ಲೋಕಸೇವಾ ಆಯೋಗದ  (ಕೆಪಿಎಸ್‌ಸಿ) ಸದಸ್ಯರಾಗಿ ನೇಮಕ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ರಾಜ್ಯಪಾಲ ವಜುಭಾಯಿ ವಾಲಾ ಅವರು ನೇಮಕಕ್ಕೆ ಒಪ್ಪಿಗೆ ಕೊಟ್ಟ ನಂತರ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ. ಕಲಬುರ್ಗಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ  ಡಾ.ನಾಗಾಬಾಯಿ ಬುಳ್ಳಾ,  ಚನ್ನ­ಪಟ್ಟಣದ ರಘುನಂದನ್‌ ರಾಮಣ್ಣ, ಮೈಸೂರಿನ ಪ್ರೊ.ಎಚ್‌. ಗೋವಿಂದಯ್ಯ, ಅರಣ್ಯ ಅಧಿಕಾರಿ ಮೈಕೆಲ್‌ ಸೈಮನ್‌ ಬರೆಟ್ಟೊ ಅವರನ್ನು ಕೆಪಿಎಸ್‌ಸಿ ಸದಸ್ಯರಾಗಿ ನೇಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.