ADVERTISEMENT

ಕೆರೆಯಲ್ಲಿ ಮುಳುಗಿ ನಾಲ್ಕು ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2017, 10:36 IST
Last Updated 18 ನವೆಂಬರ್ 2017, 10:36 IST
ನೀರಿನಲ್ಲಿ ಮುಳುಗಿ ಮೃತಪಟ್ಟವರು
ನೀರಿನಲ್ಲಿ ಮುಳುಗಿ ಮೃತಪಟ್ಟವರು   

ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ವಿರೂಪಾಕ್ಷಿಪುರದ ರಾಮಯ್ಯನ ಕೆರೆಯಲ್ಲಿ ಶನಿವಾರ ಮಧ್ಯಾಹ್ನ ಬಟ್ಟೆ ತೊಳೆಯಲು ಹೋಗಿದ್ದ ನಾಲ್ಕು ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮಾಲತಿ (30), ಅವರ ಪುತ್ರಿ ಪೂರ್ಣಿಮಾ (10), ಅನು (14) ಹಾಗೂ ನಮ್ರತಾ (11) ಮೃತರು. ಬಟ್ಟೆ ತೊಳೆಯುತ್ತಿದ್ದ ವೇಳೆ ಒಬ್ಬರು ಕಾಲು ಜಾರಿ ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋಗಿ ಉಳಿದ ಮೂರೂ ಮಂದಿ ನೀರು ಪಾಲಾಗಿದ್ದಾರೆ. ಶವಗಳನ್ನು ನೀರಿನಿಂದ ಹೊರ ತೆಗೆಯಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT