ಚನ್ನಪಟ್ಟಣ (ರಾಮನಗರ ಜಿ.): ತಾಲ್ಲೂಕಿನ ವಿರೂಪಾಕ್ಷಿಪುರದ ರಾಮಯ್ಯನ ಕೆರೆಯಲ್ಲಿ ಶನಿವಾರ ಮಧ್ಯಾಹ್ನ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ವಿರೂಪಾಕ್ಷಿಪುರದ ನಿವಾಸಿಗಳಾದ ಗಾಯತ್ರಿ (35), ಅವರ ಪುತ್ರಿ ಪೂರ್ಣಿಮಾ (10), ಪಕ್ಕದ ಮನೆಯವರಾದ ಅನು (14) ಹಾಗೂ ನಮ್ರತಾ (11) ಮೃತರು. ಅವರು ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಟ್ಟೆ ತೊಳೆಯುತ್ತಿದ್ದ ವೇಳೆ ಸೀರೆಯು ಕೆರೆಯ ನೀರಿಗೆ ಬಿದ್ದಿದ್ದು, ಅದನ್ನು ಎತ್ತಿಕೊಳ್ಳಲು ಹೋಗಿ ಗಾಯತ್ರಿ ನೀರಿನಲ್ಲಿ ಮುಳುಗಿದರು. ಅವರನ್ನು ರಕ್ಷಿಸುವ ಯತ್ನದಲ್ಲಿ ಉಳಿದ ಮೂವರೂ ನೀರುಪಾಲಾದರು ಎಂದು ಪೊಲೀಸರು ತಿಳಿಸಿದರು.
ನಾಲ್ವರ ಶವಗಳನ್ನು ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.