ADVERTISEMENT

ಕೆ.ಸಾಂಬಶಿವಪ್ಪ ಸಾಹಿತ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2015, 19:40 IST
Last Updated 24 ಅಕ್ಟೋಬರ್ 2015, 19:40 IST

ತುಮಕೂರು:  ತುಮಕೂರು ಅನನ್ಯ ಪ್ರಕಾಶನ 2014ನೇ ಸಾಲಿನ ದಿವಂಗತ ಕೆ.ಸಾಂಬಶಿವಪ್ಪ ಸ್ಮಾರಕ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿದೆ.

ಪ್ರಶಸ್ತಿಯು ₹ 5 ಸಾವಿರ ನಗದು, ಸ್ಮರಣಿಕೆ ಒಳಗೊಂಡಿರುತ್ತದೆ. 2014ರಲ್ಲಿ ಪ್ರಕಟವಾದ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದ ಕೃತಿಗಳನ್ನು ಕಳುಹಿಸಬಹುದಾಗಿದೆ.

ನ. 10ರ ಒಳಗೆ ಎರಡು ಪ್ರತಿಗಳನ್ನು ಎಂ.ಸಿ.ಲಲಿತ, ‘ನಿಸರ್ಗ’ ಮುನಿಸಿಪಲ್ ಲೇಔಟ್, ಸಿದ್ದಗಂಗಾ ಬಡಾವಣೆ, ತುಮಕೂರು– ಇಲ್ಲಿಗೆ ಕಳುಹಿಸಬೇಕು. ಮಾಹಿತಿಗೆ ಮೊ 9880113462 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.