ಹುಬ್ಬಳ್ಳಿ: ಕೇಂದ್ರ ಸರ್ಕಾರ ವಿರೋಧ ಪಕ್ಷದ ನಾಯಕರ ಮೇಲೆ ಐಟಿ ದಾಳಿ ನಡೆಸುವ ಮೂಲಕ ರಾಜಕೀಯ ಭಯೋತ್ಪಾದನೆ ಮಾಡುತ್ತಿದೆ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಟೀಕಿಸಿದರು.
ಇಲ್ಲಿನ ಬೆಳಗಾವಿ ವಿಭಾಗದ ಬೂತ್ ಸಮಿತಿ ಸಭೆಗೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಗೋಹತ್ಯೆನಿಷೇಧ ಮಾಡುವ ಮುನ್ನ ಕೇಂದ್ರ ಸರ್ಕಾರ ಮುದಿ ಗೋವುಗಳನ್ನು ಸಾಕಲು ಗೋಶಾಲೆಗಳನ್ನು ತೆರೆಯಬೇಕು. ಇದಕ್ಕೆ ಹಣ ಮೀಸಲಿಡಬೇಕು ಎಂದರು.
ಮುಖ್ಯಮಂತ್ರಿಯಾಗಿದ್ದಾಗ ಸಾಲ ಮನ್ನಾ ಮಾಡಲು ಒಪ್ಪದ ಯಡಿಯೂರಪ್ಪ ಇಂದು ಹೋದ ಕಡೆಯಲ್ಲೆಲ್ಲ ಸಾಲ ಮನ್ನಾ ಮಾಡುವ ಬಗ್ಗೆ ಭರವಸೆ ನೀಡುತ್ತಿರುವುದು ಹಾಸ್ಯಾಸ್ಪದ ಎಂದರು. ನಾನು ಸಾಲ ಮನ್ನಾ ಮಾಡುವಾಗಲೂ ಬಿಎಸ್ವೈ ಅಡ್ಡಿ ಮಾಡಿದ್ದರು ಎಂದು ಕುಮಾರಸ್ವಾಮಿ ಟೀಕಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.