ಹೊಸಕೋಟೆ: ತಾಲ್ಲೂಕಿನ ಬನಹಳ್ಳಿ ಬಳಿ ಭಾನುವಾರ ಬೆಳಿಗ್ಗೆ ಅಪಘಾತಕ್ಕೆ ತುತ್ತಾಗಿ ಗಾಯಗೊಂಡು ರಸ್ತೆಯ ಬದಿ ಬಿದ್ದಿದ್ದ ಜಿಂಕೆಯನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
ಆಹಾರ ಅರಸಿ ರಾತ್ರಿ ಹೊತ್ತು ಗ್ರಾಮದ ಬಳಿ ಬಂದ ಸುಮಾರು 5 ವರ್ಷದ ಜಿಂಕೆ ರಸ್ತೆ ದಾಟುವಾಗ ವಾಹನವೊಂದು ಡಿಕ್ಕಿ ಹೊಡೆದಿದ್ದು, ಅದರ ಬೆನ್ನಿನ ಭಾಗಕ್ಕೆ ತೀವ್ರ ಗಾಯವಾಗಿತ್ತು.
ನಂದಗುಡಿಯ ಪಶು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ಅದನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಯಿತು ಎಂದು ಗ್ರಾಮಸ್ಥರೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.