ADVERTISEMENT

ಗುಂಪು ಘರ್ಷಣೆ: ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2017, 19:30 IST
Last Updated 19 ಫೆಬ್ರುವರಿ 2017, 19:30 IST
ಪ್ರತಾಪ್‌
ಪ್ರತಾಪ್‌   

ಮಂಗಳೂರು: ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಒಂದು ಗುಂಪು ಮತ್ತೊಂದು ಗುಂಪಿನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ, ಒಬ್ಬನನ್ನು ಕೊಚ್ಚಿ ಕೊಲೆಮಾಡಿ, ಮತ್ತೊಬ್ಬನನ್ನು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಇಲ್ಲಿನ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನಿಡ್ಡೆಲ್‌ನಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಮರೋಳಿ ನಿವಾಸಿ ಪ್ರತಾಪ್‌ ಪೂಜಾರಿ (23) ಕೊಲೆಯಾಗಿರುವ ಯುವಕ. ಈತನ ಸ್ನೇಹಿತ ಮಣಿಕಂಠ ಎಂಬಾತನಿಗೆ ಆರೋಪಿಗಳು ಮಾರಕಾಸ್ತ್ರಗಳಿಂದ ಎಡಗೈಗೆ ಕಡಿದಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಇಬ್ಬರ ಜತೆಗಿದ್ದ ನಿತೇಶ್‌ ಎಂಬ ಯುವಕನ ಮೇಲೂ ಹಲ್ಲೆ ನಡೆದಿದೆ. ಆರೋಪಿಗಳ ಪತ್ತೆಗೆ ವಿಶೇಷ ತನಿಖಾ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕೌಶಿಕ್‌, ಮಿಥುನ್‌, ಸಾಗರ್‌, ತಿಲಕ್‌, ಶಿವು, ಶರಣ್‌, ರಾಜೇಶ್‌, ಮನೀಶ್‌, ನಿಶಿತ್‌, ನಿಖಿಲ್‌ ಮತ್ತು ಮನೋಜ್‌ ಎಂಬುವವರ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕೊಲೆ ಮತ್ತು ಹಲ್ಲೆಗೆ ಒಳಗಾದವರು ಹಾಗೂ ಆರೋಪಿಗಳು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.