ADVERTISEMENT

ಚಾತುರ್ಮಾಸ್ಯ ಸ್ವಾಗತ ಸಮಾರಂಭ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2015, 19:51 IST
Last Updated 6 ಆಗಸ್ಟ್ 2015, 19:51 IST

ಬೆಂಗಳೂರು:‘ಉಡುಪಿ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಯವರ 78ನೇ ಚಾತುರ್ಮಾಸ್ಯ ಸ್ವಾಗತ ಸಮಾರಂಭವನ್ನು ನಗರದಲ್ಲಿ ಶನಿವಾರ (ಆಗಸ್ಟ್‌ 8) ಹಮ್ಮಿಕೊಳ್ಳಲಾಗಿದೆ’ ಎಂದು ಮಠದ ಕಾರ್ಯದರ್ಶಿ ಕೇಶವಾಚಾರ್ಯ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ವಿಶ್ವೇಶ ತೀರ್ಥರು ತಮ್ಮ 8ನೇ ವಯಸ್ಸಿನಲ್ಲಿ ಸನ್ಯಾಸ ಸ್ವೀಕಾರ ಮಾಡಿದರು. ಈಗ ಶ್ರೀಗಳಿಗೆ 86 ವರ್ಷಗಳಾಗಿದ್ದು, ಈ ಬಾರಿ ಅವರು 78ನೇ ಚಾತುರ್ಮಾಸ್ಯ ಸಂಕಲ್ಪವನ್ನು ಬೆಂಗಳೂರಿನಲ್ಲಿ ಆಚರಿಸುತ್ತಿರುವುದು ವಿಶೇಷವಾಗಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.