ADVERTISEMENT

ಚಿತ್ರ ನಟ ಜಗ್ಗೇಶ್‌ ಪುತ್ರನಿಗೆ ₹ 500 ದಂಡ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2017, 19:30 IST
Last Updated 19 ಸೆಪ್ಟೆಂಬರ್ 2017, 19:30 IST

ಮಡಿಕೇರಿ: ಸಂಚಾರ ನಿಯಮ ಉಲ್ಲಂಘಿಸಿದ ಚಿತ್ರನಟ ಜಗ್ಗೇಶ್ ಪುತ್ರ ಯತಿರಾಜ್‌ಗೆ ₹ 500 ದಂಡ ವಿಧಿಸಲಾಗಿದೆ. ನಗರದ ಏಕಮುಖ ಸಂಚಾರವಿರುವ ಕೊಹಿನೂರು ರಸ್ತೆಯಲ್ಲಿ ಕಾರು ಚಲಾಯಿಸುತ್ತಿದ್ದ ಕಾರಣ ದಂಡ ಹಾಕಲಾಗಿದೆ.

ಕೊಡಗು ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದ ಅವರು, ಮಂಗಳವಾರ ಮಧ್ಯಾಹ್ನದ ವೇಳೆಗೆ ಮಡಿಕೇರಿ ನಗರಕ್ಕೆ ಬಂದಿದ್ದರು. ತಮ್ಮ ಕೆಎ 04 ಎನ್‌ಟಿ 3666 ನೋಂದಣಿ ಇಕೋ ಸ್ಪೋರ್ಟ್ಸ್ ಕಾರಿನಲ್ಲಿ ಏಕಮುಖ ಸಂಚಾರ ರಸ್ತೆಯಲ್ಲಿ ತೆರಳುತ್ತಿದ್ದರು. ಆಗ ಅಲ್ಲಿದ್ದ ಸ್ಥಳೀಯರು, ಆಟೊ ಚಾಲಕರು ಯತಿರಾಜ್‌ ಅವರನ್ನು ಪ್ರಶ್ನಿಸಿದ್ದಾರೆ. ಆಗ ವಾಗ್ವಾದ ನಡೆದಿದೆ.
ಅಸಮಾಧಾನಗೊಂಡ ಸ್ಥಳೀಯರು ವಾಹನ ತಡೆದು, ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಬಂದ ಎಎಸ್‌ಐ ಶಿವಪ್ಪ ಅವರು ಯತಿರಾಜ್‌ ಅವರಿಗೆ ದಂಡ ವಿಧಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿ ಯತಿರಾಜ್‌, ‘ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ’ ಎಂದಷ್ಟೇ ಹೇಳಿ ಹೊರಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.