ADVERTISEMENT

ಛಾಯಾಚಿತ್ರಕ್ಕೆ ಚಿನ್ನದ ಪ್ರಶಸ್ತಿಯ ಗರಿ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2016, 19:30 IST
Last Updated 8 ಡಿಸೆಂಬರ್ 2016, 19:30 IST
ಚಿನ್ನದ ಪದಕಕ್ಕೆ ಆಯ್ಕೆಯಾಗಿರುವ  ಛಾಯಾಚಿತ್ರ
ಚಿನ್ನದ ಪದಕಕ್ಕೆ ಆಯ್ಕೆಯಾಗಿರುವ ಛಾಯಾಚಿತ್ರ   

ಬ್ಯಾಡಗಿ (ಹಾವೇರಿ ಜಿಲ್ಲೆ): ತಾಲ್ಲೂಕಿನ ಕದರಮಂಡಲಗಿ ಗ್ರಾಮದ ಹವ್ಯಾಸಿ ವನ್ಯಜೀವಿ ಛಾಯಾಗ್ರಾಹಕ ಶಶಿಧರಸ್ವಾಮಿ ಹಿರೇಮಠ ಕ್ಯಾಮೆರಾದಲ್ಲಿ ಸೆರೆಹಿಡಿದ ‘ಹಳದಿ ಚಿಟ್ಟೆಗಳ ಮಿಲನ’ ಛಾಯಾಚಿತ್ರಕ್ಕೆ ಚಿನ್ನದ ಪದಕ ಲಭಿಸಿದೆ.

ಪಶ್ಚಿಮ ಬಂಗಾಳದ ಸಿರಾಮಪುರೆ ಫೋಟೊ ಫೋಕಸ್ ಆಯೋಜಿಸಿದ್ದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆ–2016ರ ನಿಸರ್ಗ ವಿಭಾಗದಲ್ಲಿ 2ನೇ ಬಾರಿ ಅವರಿಗೆ ಚಿನ್ನದ ಪದಕ ಲಭಿಸಿದೆ. ಶಶಿಧರಸ್ವಾಮಿ ಅವರು ಈಗ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಕನಕ ಪರಿಸರಸ್ನೇಹಿ ಉದ್ಯಾನದಲ್ಲಿ ಚಿಟ್ಟೆ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.