ADVERTISEMENT

ಜನರಿಗೆ ವಿಶ್ವಾಸದ್ರೋಹ ಮಾಡುತ್ತಿರುವ ರಾಜ್ಯ ಸರ್ಕಾರ: ಎಸ್.ಆರ್. ಹಿರೇಮಠ

​ಪ್ರಜಾವಾಣಿ ವಾರ್ತೆ
Published 19 ಮೇ 2017, 10:31 IST
Last Updated 19 ಮೇ 2017, 10:31 IST
ಜನರಿಗೆ ವಿಶ್ವಾಸದ್ರೋಹ ಮಾಡುತ್ತಿರುವ ರಾಜ್ಯ ಸರ್ಕಾರ: ಎಸ್.ಆರ್. ಹಿರೇಮಠ
ಜನರಿಗೆ ವಿಶ್ವಾಸದ್ರೋಹ ಮಾಡುತ್ತಿರುವ ರಾಜ್ಯ ಸರ್ಕಾರ: ಎಸ್.ಆರ್. ಹಿರೇಮಠ   

ಹುಬ್ಬಳ್ಳಿ: ಜಂತಕಲ್ ಮೈನಿಂಗ್ ಸೇರಿದಂತೆ ಅಕ್ರಮ ಗಣಿಗಾರಿಕೆಯ ವಿರುದ್ಧ ರಾಜ್ಯ ಸರ್ಕಾರವು ಕ್ರಮಕೈಗೊಳ್ಳದೇ ಜನರಿಗೆ ವಿಶ್ವಾಸದ್ರೋಹ ಮಾಡುತ್ತಿದೆ ಎಂದು ಸಮಾಜ ಪರಿವರ್ತನೆ ಸಮುದಾಯ ಸಂಸ್ಥಾಪಕ ಎಸ್.ಆರ್. ಹಿರೇಮಠ ಗುರುವಾರ ಆರೋಪಿಸಿದರು.

ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಅಕ್ರಮ ಗಣಿಗಾಣಿಕೆ ಜನಕರಾಗಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಎನ್. ಧರ್ಮಸಿಂಗ್, ಬಿ.ಎಸ್. ಯಡಿಯೂರಪ್ಪ ಅಕ್ರಮ ಗಣಿಗಾರಿಕೆ ಪ್ರಕಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಅರೋಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಆಕ್ರಮ ಗಣಿಗಾರಿಕೆ ವಿರುದ್ಧ ಕ್ರಮಕೈಗೊಳ್ಳಲು ರಚಿಸಲಾಗಿರುವ ಕ್ಯಾಬಿನೆಟ್ ಉಪ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ನಿಷ್ಕ್ರಿಯರಾಗಿದ್ದಾರೆ ಎಂದು ಎಸ್.ಆರ್. ಹಿರೇಮಠ ಟೀಕಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.