ADVERTISEMENT

ಜಾತಿ ಗಣತಿ ವರದಿ ಶೀಘ್ರ ಬಿಡುಗಡೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2017, 20:18 IST
Last Updated 16 ಏಪ್ರಿಲ್ 2017, 20:18 IST
ಜಾತಿ ಗಣತಿ ವರದಿ ಶೀಘ್ರ ಬಿಡುಗಡೆ: ಸಿದ್ದರಾಮಯ್ಯ
ಜಾತಿ ಗಣತಿ ವರದಿ ಶೀಘ್ರ ಬಿಡುಗಡೆ: ಸಿದ್ದರಾಮಯ್ಯ   

ನವದೆಹಲಿ: ಜಾತಿ ಗಣತಿಗೆ ಸಂಬಂಧಿಸಿದ ವರದಿಯನ್ನು ಶೀಘ್ರದಲ್ಲೇ  ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ನವದೆಹಲಿಯಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಜತೆ ಈಗಾಗಲೇ ಚರ್ಚೆ ನಡೆಸಿದ್ದು, ವರದಿಯನ್ನು  ಶೀಘ್ರದಲ್ಲೇ ಅಂತಿಮಗೊಳಿಸಲು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಆಯೋಗವು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಮಾಹಿತಿ ಸಂಗ್ರಹಿಸುತ್ತಿದೆ. ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದರೆ, ಅದನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಇರಬೇಕು ಎನ್ನುವುದಕ್ಕೆ ಸರ್ಕಾರ ಬದ್ಧವಾಗಿದೆ. ಸಾಮಾಜಿಕ– ಆರ್ಥಿಕ ಸಮೀಕ್ಷಾ ವರದಿ ದೊರೆತ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.