ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ಗೆ ಹಿರಿಯ ಕವಿ ಜಿನದತ್ತ ದೇಸಾಯಿ (ಸಾಹಿತ್ಯ ಮತ್ತು ನ್ಯಾಯಾಂಗ ಸೇವಾ ಕ್ಷೇತ್ರ) ಹಾಗೂ ಬಾಗಲಕೋಟೆಯ ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ (ಶಿಕ್ಷಣ ಹಾಗೂ ಸಮಾಜ ಸೇವಾ ಕ್ಷೇತ್ರ) ಆಯ್ಕೆಯಾಗಿದ್ದಾರೆ.
ಇದೇ 8ರಂದು ಬೆಳಿಗ್ಗೆ 11ಕ್ಕೆ ವಿಟಿಯು ಸಭಾಂಗಣದಲ್ಲಿ ನಡೆಯುವ 5ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅಧ್ಯಕ್ಷತೆ ವಹಿಸುವರು. ನ್ಯಾಕ್ ನಿರ್ದೇಶಕ ಪ್ರೊ.ಡಿ.ಪಿ. ಸಿಂಗ್ ಪ್ರಧಾನ ಭಾಷಣ ಮಾಡುವರು ಎಂದು ಕುಲಸಚಿವ ಪ್ರೊ.ಸಿದ್ದು ಪಿ. ಆಲಗೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.