ADVERTISEMENT

ಟವರ್‌ ಮೇಲಿಂದ ಬಿದ್ದು ಕೈದಿ ಸಾವು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 19:30 IST
Last Updated 26 ಏಪ್ರಿಲ್ 2018, 19:30 IST

ಬಳ್ಳಾರಿ: ಇಲ್ಲಿನ ಕೇಂದ್ರ ಕಾರಾಗೃಹದ ಹೈಮಾಸ್ಟ್‌ ದೀಪದ ಗೋಪುರದಿಂದ ಬಿದ್ದು ಮಾನಸಿಕ ಅಸ್ವಸ್ಥ ಕೈದಿ ನಾಗೇಂದ್ರ ಮೂರ್ತಿ (35) ಸ್ಥಳದಲ್ಲೇ ಮೃತಪಟ್ಟಿದ್ದಾನೆ.

‘ಗುರುವಾರ ಬೆಳಿಗ್ಗೆ 11.05ರ ವೇಳೆಗೆ ಘಟನೆ ನಡೆದಿದ್ದು, ಕೈದಿ ಗೋಪುರದ ಮೇಲಿನಿಂದ ಬೀಳುವುದನ್ನು ತಡೆಯಲು ಸಿಬ್ಬಂದಿಗೆ ಸಾಧ್ಯವಾಗಿಲ್ಲ. ಆದರೆ ಅದಕ್ಕೂ ಮುನ್ನ ಆತನ ಪ್ರಾಣ ರಕ್ಷಣೆಗೆ ಪ್ರಯತ್ನ ನಡೆದಿತ್ತು’ ಎಂದು ಕಾರಾಗೃಹದ ಅಧೀಕ್ಷಕ ಡಾ.ಪಿ.ರಂಗನಾಥ್‌ ತಿಳಿಸಿದರು.

‘ಬೆಂಗಳೂರು ಉತ್ತರ ತಾಲ್ಲೂಕಿನ ಲಿಂಗದಹಳ್ಳಿಯ ಆತನಿಗೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ಆಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆಸಿದ್ದರಿಂದ ಆತನನ್ನು ಜುಲೈನಲ್ಲಿ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿತ್ತು. ಮೊದಲಿನಿಂದಲೂ ಆತ ಮಾನಸಿಕ ಅಸ್ವಸ್ಥನಾಗಿದ್ದು, ನಿರಂತರ ಚಿಕಿತ್ಸೆ ಪಡೆಯುತ್ತಿದ್ದ’ ಎಂದು ಅವರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.