ADVERTISEMENT

ಡಾ.ಟಿ.ತಿಪ್ಪೇಸ್ವಾಮಿ ನಿಧನ

​ಪ್ರಜಾವಾಣಿ ವಾರ್ತೆ
Published 14 ಜನವರಿ 2015, 19:30 IST
Last Updated 14 ಜನವರಿ 2015, 19:30 IST
ಡಾ.ಟಿ.ತಿಪ್ಪೇಸ್ವಾಮಿ ನಿಧನ
ಡಾ.ಟಿ.ತಿಪ್ಪೇಸ್ವಾಮಿ ನಿಧನ   

ಜಗಳೂರು: ಸಾಹಿತಿ ಹಾಗೂ ಇಲ್ಲಿನ ಅಮರ­ಭಾರತಿ ವಿದ್ಯಾಕೇಂದ್ರದ ಸಂಸ್ಥಾಪಕ ಡಾ.ಟಿ.ತಿಪ್ಪೇಸ್ವಾಮಿ (77) ಬುಧವಾರ ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರು.

ಅವರಿಗೆ ಪತ್ನಿ, ಮಗ, ಇಬ್ಬರು ಪುತ್ರಿಯರು, ಮಾಜಿ ಶಾಸಕರೂ ಆದ ಸಹೋದರ ಟಿ. ಗುರುಸಿದ್ದನಗೌಡ ಇದ್ದಾರೆ.
ಮೃತರ ಅಂತ್ಯಸಂಸ್ಕಾರ ಪಟ್ಟಣದಲ್ಲಿ ಬುಧವಾರ ನಡೆಯಿತು.

ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಅನುಯಾಯಿಯಾಗಿದ್ದ ಡಾ.ತಿಪ್ಪೇ­ಸ್ವಾಮಿ, ಲೋಕಶಕ್ತಿ ಪಕ್ಷದ ಜಿಲ್ಲಾ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು.

ಬರಹಗಾರರಾಗಿಯೂ ಗುರುತಿಸಿಕೊಂಡಿದ್ದ ಅವರು ದಾವಣಗೆರೆಯಲ್ಲಿ ಎರಡು ವರ್ಷ ಹಿಂದೆ ನಡೆದ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮ್ಮೇಳನದ ಅಧ್ಯಕ್ಷರಾಗಿ ಹಾಗೂ ಜಗಳೂರು ತಾಲ್ಲೂಕು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ  ಆಯ್ಕೆಯಾಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.