ಕಲಬುರ್ಗಿ: ‘ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರೂಪಕ್ಕುಮಾರ್ ದತ್ತಾ ಅವರ ಸೇವೆಯನ್ನು ಮುಂದುವರಿಸುವುದಿಲ್ಲ’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಇಲ್ಲಿ ಹೇಳಿದರು.
‘ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ಈಗಾಗಲೇ ಐದು ಜನರ ಹೆಸರುಗಳನ್ನು ಪರಿಶೀಲಿಸಿ, ಮುಖ್ಯಮಂತ್ರಿ ಅವರಿಗೆ ಸಲ್ಲಿಸಲಾಗಿದೆ. ಅವರಲ್ಲಿ ಒಬ್ಬರ ಹೆಸರನ್ನು ಮುಖ್ಯಮಂತ್ರಿ ಅಂತಿಮಗೊಳಿಸಲಿದ್ದಾರೆ’ ಎಂದು ಭಾನುವಾರ ಇಲ್ಲಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.