ADVERTISEMENT

ಡಿನೋಟಿಫಿಕೇಷನ್‌ ಪ್ರಕರಣ: ಬೆಂಬಲಕ್ಕೆ ಸಿಎಂ ಮನವಿ

​ಪ್ರಜಾವಾಣಿ ವಾರ್ತೆ
Published 29 ಜನವರಿ 2015, 20:01 IST
Last Updated 29 ಜನವರಿ 2015, 20:01 IST

ಬೆಂಗಳೂರು: ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪ ವಿಧಾನಮಂಡಲ­ದಲ್ಲಿ ಪ್ರಸ್ತಾಪವಾದರೆ ಬೆಂಬಲಕ್ಕೆ ನಿಂತು ಸಮರ್ಥಿಸಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಚಿವರಿಗೆ ಮನವಿ ಮಾಡಿಕೊಂಡಿದ್ದಾರೆ.

ಗುರುವಾರ ಸಂಪುಟ ಸಭೆಯ ಕೊನೆಯಲ್ಲಿ ಅಧಿಕಾರಿಗಳನ್ನು ಹೊರಕ್ಕೆ ಕಳುಹಿಸಿ ಸಚಿವರ ಜೊತೆ ಕೆಲಕಾಲ ಮಾತನಾಡಿದ್ದಾರೆ. ಡಿನೋಟಿಫಿಕೇಷನ್‌ ಆರೋಪಕ್ಕೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳನ್ನು ಸಚಿವರ ಜೊತೆ ಹಂಚಿಕೊಂಡಿದ್ದಾರೆ. ವಿಧಾನ­ಮಂಡಲ­ದಲ್ಲಿ ಪ್ರತಿಪಕ್ಷಗಳು ಆರೋಪ ಮಾಡಿ­ದರೆ ಸಮರ್ಥ ಉತ್ತರದ ಮೂಲಕ ಸರ್ಕಾರಕ್ಕೆ ಮುಜುಗರ ಆಗುವುದನ್ನು ತಪ್ಪಿಸಬೇಕು ಎಂದು ಕೋರಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.