ಮಂಗಳೂರು: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ 28ನೇ ರಾಜ್ಯಮಟ್ಟದ ‘ಜಾಂಬೂರೇಟ್’ ಅನ್ನು ಡಿಸೆಂಬರ್ 17ರಿಂದ 23ರವರೆಗೆ ನಗರದಲ್ಲಿ ಆಯೋಜಿಸಲಾಗಿದೆ ಎಂದು ಅರಣ್ಯ ಸಚಿವ ಬಿ. ರಮಾನಾಥ ರೈ ತಿಳಿಸಿದರು.
ಮಂಗಳವಾರ ನಗರದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 27 ವರ್ಷದ ಬಳಿಕ ಮಂಗಳೂರಿನಲ್ಲಿ ಜಾಂಬೂರೇಟ್ ನಡೆಯಲಿದೆ ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ಮಾತನಾಡಿ, 10 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ನೆರೆ ರಾಜ್ಯಗಳು ಹಾಗೂ ವಿದೇಶಗಳಿಂದಲೂ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.
ಪ್ರತಿಭಾ ಪ್ರದರ್ಶನ, ಸ್ಕೌಟ್ಸ್ ಮತ್ತು ಗೈಡ್ಸ್ ವಸ್ತು ಪ್ರದರ್ಶನ, ಸಾಹಸಮಯ ಚಟುವಟಿಕೆಗಳು, ಪಥ ಸಂಚಲನ, ಆಹಾರ ಮೇಳ, ಯುವ ಸಮಾವೇಶ ಸೇರಿದಂತೆ ವಿವಿಧ ರೀತಿಯ ಚಟುವಟಿಕೆಗಳು ನಡೆಯಲಿದ್ದು, ಸಮ್ಮೇಳನಕ್ಕೆ ₹ 3 ಕೋಟಿ ವೆಚ್ಚ ಅಂದಾಜಿಸಲಾಗಿದೆ ಎಂದು ಸ್ಕೌಟ್ಸ್ನ ಜಿಲ್ಲಾ ಮುಖ್ಯ ಆಯುಕ್ತ ಎನ್.ಜಿ. ಮೋಹನ್ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.