ADVERTISEMENT

ತಪ್ಪಿಸಿಕೊಂಡಿದ್ದ ಕೈದಿ ಬಂಧನ

​ಪ್ರಜಾವಾಣಿ ವಾರ್ತೆ
Published 30 ಜೂನ್ 2015, 19:30 IST
Last Updated 30 ಜೂನ್ 2015, 19:30 IST

ಮೊಳಕಾಲ್ಮುರು: ಜೀವಾವಧಿ ಶಿಕ್ಷೆಗೆ ಗುರಿಯಾದ ಕೆಲವೇ ಹೊತ್ತಿನ ನಂತರ ಚಿತ್ರದುರ್ಗ ಪೊಲೀಸರಿಂದ ತಪ್ಪಿಸಿ ಕೊಂಡಿದ್ದ ಕೈದಿ ನಾಗರಾಜನನ್ನು ಮಂಗ ಳವಾರ ಬೆಳಿಗ್ಗೆ ಪಟ್ಟಣದಲ್ಲಿ ಬಂಧಿಸಲಾಗಿದೆ. ಚಳ್ಳಕೆರೆ ತಾಲ್ಲೂಕಿನ ಕಾಲುವೇಹಳ್ಳಿ ಗ್ರಾಮದ ಬಸ್ ಏಜೆಂಟ್ ನಾಗರಾಜ್‌ (32) ಸೋಮವಾರ ಚಿತ್ರದುರ್ಗ  ನ್ಯಾಯಾಲಯ ಆವರಣದಿಂದ, ಜೈಲಿಗೆ ಕರೆದುಕೊಂಡು ಹೋಗುವಾಗ ತಪ್ಪಿಸಿ ಕೊಂಡಿದ್ದ.

ಪತ್ನಿಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಆರೋಪ ಈತನ ಮೇಲಿದ್ದು, ಚಿತ್ರದುರ್ಗ ಜಿಲ್ಲಾ ಸೆಷನ್ಸ್‌ ನ್ಯಾಯಾಲಯ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಆರೋಪಿ ಯನ್ನು ಜೈಲಿಗೆ ಕರೆದುಕೊಂಡು ಹೋಗು ವಾಗ ನ್ಯಾಯಾಲಯ ಆವರಣದಲ್ಲಿ ಎಎಸ್‌ಐ ಕೆಂಚಪ್ಪ ಅವರನ್ನು ತಳ್ಳಿ ತಪ್ಪಿಸಿಕೊಂಡಿದ್ದ. ಸಂಬಂಧಿಗಳ ಊರಾದ ಆಂಧ್ರದ ರಾಯದುರ್ಗಕ್ಕೆ ಹೋಗುವಾಗ ಮಾರ್ಗ ಮಧ್ಯೆ ಮೊಳಕಾಲ್ಮುರಿನ ಬಸ್‌ ನಿಲ್ದಾಣ ದಲ್ಲಿ ಈತನನ್ನು ಬಂಧಿಸಲಾಯಿತು ಎಂದು ಡಿವೈಎಸ್‌ಪಿ ಶ್ರೀನಿವಾಸ್‌  ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.