ಬೆಂಗಳೂರು: ತಮಿಳುನಾಡಿನ ತಿರುವಣ್ಣಾ ಮಲೈನಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮೇಲೆ ದಾಳಿ ನಡೆದ ಕಾರಣ ಕರ್ನಾಟಕದಿಂದ ತಮಿಳುನಾಡಿಗೆ ಹೋಗುವ ಬಸ್ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಇಂದು ಬೆಳಗ್ಗೆ ಕಿಡಿಗೇಡಿಗಳು ಕೆಎಸ್ಆರ್ಟಿಸಿ ಬಸ್ ಮೇಲೆ ಬಾಟಲಿ ಎಸೆದಿದ್ದು , ಬಸ್ ಹಿಂಬದಿಯ ಗಾಜು ಪುಡಿ ಪುಡಿಯಾಗಿದೆ.
ಈ ಘಟನೆಯ ನಂತರ ತಮಿಳುನಾಡಿಗೆ ಹೋಗುವ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪಿಆರ್ಒ ಹೇಳಿಕೆ ನೀಡಿದ್ದಾರೆ.
ಇತ್ತ, ತಮಿಳುನಾಡಿನಿಂದ ಕರ್ನಾಟಕಕ್ಕೆ ಬರುವ ಟಿಎನ್ಎಸ್ಟಿಸಿ ಬಸ್ಗಳನ್ನು ತಮಿಳುನಾಡು ಸರ್ಕಾರ ವಾಪಸ್ ಕರೆಸಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.