ADVERTISEMENT

ತಿವಾರಿ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸಿ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 19 ಮೇ 2017, 9:58 IST
Last Updated 19 ಮೇ 2017, 9:58 IST
ತಿವಾರಿ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸಿ: ಯಡಿಯೂರಪ್ಪ
ತಿವಾರಿ ಸಾವಿನ ತನಿಖೆಯನ್ನು ಸಿಬಿಐಗೆ ಒಪ್ಪಿಸಿ: ಯಡಿಯೂರಪ್ಪ   

ಚಿತ್ರದುರ್ಗ: ‘ಆಹಾರ ಇಲಾಖೆ ಆಯುಕ್ತ ಅನುರಾಗ್ ತಿವಾರಿ ಸಾವು ನಿಗೂಢವಾಗಿದ್ದು, ಈ ಪ್ರಕರಣವನ್ನು ಸಿಬಿಐ ತನಿಖೆಗೆವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಆಗ್ರಹಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತಿವಾರಿ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಶೋಭಾ ಕರಂದ್ಲಾಜೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ.

ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸದಿದ್ದರೆ, ಉತ್ತರ ಪ್ರದೇಶ ಸರ್ಕಾರವೇ ಆ ಕೆಲಸ ಮಾಡುತ್ತದೆ. ನಾನೂ ಈ ಸಂಬಂಧ ಉತ್ತರ ಪ್ರದೇಶ ಮುಖ್ಯಮಂತ್ರಿಗೆ ಪತ್ರ ಬರೆಯುತ್ತೇನೆ’ ಎಂದು ಯಡಿಯೂರಪ್ಪ ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.