ADVERTISEMENT

ದಾಖಲೆಗಳನ್ನು ಹರಿದ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಸಚಿವ ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2018, 6:11 IST
Last Updated 22 ಮಾರ್ಚ್ 2018, 6:11 IST
ದಾಖಲೆಗಳನ್ನು ಹರಿದ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಸಚಿವ ಡಿ.ಕೆ.ಶಿವಕುಮಾರ್‌
ದಾಖಲೆಗಳನ್ನು ಹರಿದ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಸಚಿವ ಡಿ.ಕೆ.ಶಿವಕುಮಾರ್‌   

ಬೆಂಗಳೂರು: ಐಟಿ ದಾಳಿ ನಡೆದ ಸಂದರ್ಭದಲ್ಲಿ ಸಾಕ್ಷ್ಯ ನಾಶಪಡಿಸಿದ (ದಾಖಲೆಗಳನ್ನು ಹರಿದ) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗುರುವಾರ ವಿಶೇಷ ನ್ಯಾಯಾಲಯಕ್ಕೆ ಹಾಜರಾದರು.

ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮತ್ತು ಈಗಲ್ಟನ್ ರೆಸಾರ್ಟ್ ಮೇಲೆ ಐಟಿ ದಾಳಿ ನಡೆದ ವೇಳೆ ದಾಖಲೆಗಳನ್ನು ಹರಿದ ಆರೋಪದಡಿ ವಿಶೇಷ ಜಾರಿ ನಿರ್ದೇಶನಾಲಯ (ಇಡಿ)ದ ಕೋರ್ಟ್‌ಗೆ ಸಹೋದರ ಡಿ.ಕೆ.ಸುರೇಶ್‌ ಅವರೊಂದಿಗೆ  ಹಾಜರಾಗಿದ್ದಾರೆ.

ಕೋರ್ಟ್ ಕಲಾಪ ಆರಂಭವಾಗುವ ಅರ್ಧ ಗಂಟೆ ಮೊದಲೇ ಡಿ.ಕೆ.ಶಿವಕುಮಾರ್ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ವಕೀಲರೊಂದಿಗೆ ಚರ್ಚೆ ನಡೆಸಿರುವ ಅವರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.