ಬೆಂಗಳೂರು: ಮಾಜಿ ಮುಖ್ಯಮಂತ್ರಿ ಧರ್ಮ ಸಿಂಗ್ ಅವರು ನಿಧನರಾಗಿದ್ದು, ಅವರ ಇಲ್ಲಿನ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿ ಧರ್ಮ ಸಿಂಗ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಇಂದು ಬೆಳಿಗ್ಗೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹಾವೇರಿ ಜಿಲ್ಲೆಗೆ ತೆರಳಿದ್ದ ಸಿದ್ದರಾಮಯ್ಯ ಅವರು, ಧರ್ಮಸಿಂಗ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆ ಕಾಗಿನೆಲೆಯಲ್ಲಿ ಆಯೋಜಿಸಿದ್ದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಬೆಂಗಳೂರಿಗೆ ಹಿಂದಿರುಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.