ADVERTISEMENT

ನಿಂತಿದ್ದ ಲಾರಿಗೆ ಕಾರ್‌ ಡಿಕ್ಕಿ: ಉದಯ ಚಾನಲ್ ನಿರೂಪಕ ಸಾವು

​ಪ್ರಜಾವಾಣಿ ವಾರ್ತೆ
Published 24 ಮೇ 2018, 8:23 IST
Last Updated 24 ಮೇ 2018, 8:23 IST
ನಿಂತಿದ್ದ ಲಾರಿಗೆ ಕಾರ್‌ ಡಿಕ್ಕಿ: ಉದಯ ಚಾನಲ್ ನಿರೂಪಕ ಸಾವು
ನಿಂತಿದ್ದ ಲಾರಿಗೆ ಕಾರ್‌ ಡಿಕ್ಕಿ: ಉದಯ ಚಾನಲ್ ನಿರೂಪಕ ಸಾವು   

ದಾವಣಗೆರೆ: ಹರಿಹರ ತಾಲ್ಲೂಕು ಹನಗವಾಡಿ ಸಮೀಪ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಿಂತ ಲಾರಿಗೆ ಕಾರ್ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ.

ಉದಯ ಮ್ಯೂಸಿಕ್ ಚಾನೆಲ್‌ನ ಕಾರ್ಯಕ್ರಮ ನಿರೂಪಕ ಚಂದ್ರಶೇಖರ(34), ಸಂತೋಷಿ (24) ಮೃತಪಟ್ಟಿದ್ದಾರೆ.

ಕಿರುತೆರೆ ಕಲಾವಿದರಾದ ರಾಮು ಮತ್ತು ಸುನೀತಾರಿಗೆ ಗಂಭೀರ ಗಾಯಗಳಾಗಿವೆ. ಇವರನ್ನು ದಾವಣಗೆರೆಯಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ಇವರು ಬೆಂಗಳೂರು ಕಡೆಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದರು. ರಸ್ತೆ ಪಕ್ಕದಲ್ಲಿ ನಿಂತ ಲಾರಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಜರುಗಿದೆ. ಹರಿಹರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


 ಚಂದ್ರಶೇಖರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.