ADVERTISEMENT

ನೀನಾಸಂ ರಂಗಶಿಕ್ಷಣ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 20 ಮೇ 2014, 19:30 IST
Last Updated 20 ಮೇ 2014, 19:30 IST

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಹೆಗ್ಗೋಡಿನ ‘ನೀನಾಸಂ ರಂಗಶಿಕ್ಷಣ ಕೇಂದ್ರ’ ೨೦೧೪-1೫ನೇ ಸಾಲಿನ ಶಿಕ್ಷಣಕ್ಕೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರವೇಶಕ್ಕೆ ಕನಿಷ್ಠ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಆಗಿದ್ದು, ಪದವೀ­ಧ­­­ರರಿಗೆ ಆದ್ಯತೆಯಿದೆ. ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಊಟ, ವಸತಿ ವ್ಯವಸ್ಥೆ ಇದೆ. ಹದಿನೈದು ಮಂದಿಗೆ ವಿದ್ಯಾರ್ಥಿ ವೇತನ ದೊರೆಯುತ್ತದೆ.

ಕೇಂದ್ರದಲ್ಲಿ ವಿದ್ಯಾರ್ಥಿಗಳಿಗೆ ರಂಗಕಲ್ಪನೆ, ರಂಗ ಇತಿಹಾಸ, ನಾಟಕ ಇತಿಹಾಸ, ರಂಗನಟನೆ, ರಂಗಸಿದ್ಧತೆ, ರಂಗವ್ಯವಸ್ಥೆ ಬಗ್ಗೆ ಸೈದ್ಧಾಂತಿಕ ಹಾಗೂ ಪ್ರಾಯೋಗಿಕ ಶಿಕ್ಷಣ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 18. ಸಂಪರ್ಕ ವಿಳಾಸ: ನೀನಾಸಂ ರಂಗಶಿಕ್ಷಣ ಕೇಂದ್ರ, ಹೆಗ್ಗೋಡು, ಸಾಗರ, ಶಿವಮೊಗ್ಗ–೫೭೭ ೪೧೭. ಫೋನ್‌: 08183-265646.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.