ADVERTISEMENT

ನ್ಯಾ. ಭಾಸ್ಕರ ರಾವ್‌ಗೆ ಸಮನ್ಸ್‌ ಜಾರಿ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2016, 20:01 IST
Last Updated 27 ಆಗಸ್ಟ್ 2016, 20:01 IST
ನ್ಯಾ. ಭಾಸ್ಕರ ರಾವ್‌ಗೆ ಸಮನ್ಸ್‌ ಜಾರಿ
ನ್ಯಾ. ಭಾಸ್ಕರ ರಾವ್‌ಗೆ ಸಮನ್ಸ್‌ ಜಾರಿ   

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದಲ್ಲಿ 7ನೇ ಆರೋಪಿ ಆಗಿರುವ ಮಾಜಿ ಲೋಕಾಯುಕ್ತ ನ್ಯಾ.ಭಾಸ್ಕರ ರಾವ್ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.

ಪ್ರಕರಣದ ತನಿಖೆ ನಡೆಸುತ್ತಿದ್ದ ಎಸ್‌ಐಟಿ 2ನೇ ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ ಈ ಸಮನ್ಸ್ ಜಾರಿ ಮಾಡಿರುವ ಲೋಕಾಯುಕ್ತ ವಿಶೇಷ ನ್ಯಾಯಾಲಯ, ಇದೇ 30ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ರಾಜ್ಯಪಾಲರ ಅನುಮತಿ ದೊರೆತ ನಂತರ ಎಸ್‌ಐಟಿ ಅಧಿಕಾರಿಗಳು ಭಾಸ್ಕರ ರಾವ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.