ADVERTISEMENT

ಪಂಚಭೂತಗಳಲ್ಲಿ ಅನಂತಮೂರ್ತಿ ಲೀನ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2014, 10:48 IST
Last Updated 23 ಆಗಸ್ಟ್ 2014, 10:48 IST

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಶುಕ್ರವಾರ ವಿಧಿವಶರಾದ ಹಿರಿಯ ಸಾಹಿತಿ ಪ್ರೊ.ಯು.ಆರ್.­ಅನಂತ­ಮೂರ್ತಿ (81) ಅವರ ಅಂತ್ಯ ಸಂಸ್ಕಾರ ನಗರದ ಕಲಾ ಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಮಧ್ಯಾಹ್ನ ನೆರವೇರಿತು.

ಬೆಂಗಳೂರು ವಿ.ವಿ ಆವರಣದಲ್ಲಿರುವ ಕಲಾಗ್ರಾಮದಲ್ಲಿ ಮಾಧ್ವ ಬ್ರಾಹ್ಮಣ ಪದ್ಧತಿಯ ಪ್ರಕಾರ ಅಂತಿಮ ಸಂಸ್ಕಾರ ನಡೆಸಲಾಯಿತು. ಅನಂತಮೂರ್ತಿ ಅವರ ಪುತ್ರ ಶರತ್ ಅವರು ಅಂತಿಮ ವಿಧಿವಿಧಾನಗಳನ್ನು ಪೂರೈಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಸಚಿವರು ಸೇರಿದಂತೆ ಗಣ್ಯರು, ಅಪಾರ  ಸಾರ್ವಜನಿಕರು ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಅನಾರೋಗ್ಯದಿಂದ ಬಳಲುತ್ತಿದ್ದ­ ಅನಂತ­ಮೂರ್ತಿ ಅವರು ಶುಕ್ರ­ವಾರ ಸಂಜೆ 6.33 ಕ್ಕೆ  ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ­ರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.