ADVERTISEMENT

ಪಿರಿಯಾಪಟ್ಟಣ: ಕಾಂಗ್ರೆಸ್‌ಗೆ ಹ್ಯಾಟ್ರಿಕ್ ಗೆಲುವು

​ಪ್ರಜಾವಾಣಿ ವಾರ್ತೆ
Published 31 ಮೇ 2013, 6:24 IST
Last Updated 31 ಮೇ 2013, 6:24 IST

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ ಜಯ ಗಳಿಸಿದ್ದಾರೆ. ಇದು ಅವರ ಹ್ಯಾಟ್ರಿಕ್ ಗೆಲುವು.

ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪಿರಿಯಾಪಟ್ಟಣದ ಪುಷ್ಪಾ ವಿದ್ಯಾಸಂಸ್ಥೆಯಲ್ಲಿ ಆರಂಭವಾದ ಮತ ಎಣಿಕೆಯಲ್ಲಿ ಒಟ್ಟು 18 ಸುತ್ತುಗಳಿದ್ದವು.

ಕಾಂಗ್ರೆಸ್ ಅಭ್ಯರ್ಥಿ ಕೆ. ವೆಂಕಟೇಶ್ 62,045 ಮತಗಳನ್ನು ಪಡೆದರೆ, ಸಮೀಪದ ಸ್ಪರ್ಧಿ ಜೆಡಿಎಸ್‌ನ ಕೆ. ಮಹದೇವ್ 59,957 ಮತಗಳನ್ನು ಪಡೆದರು. ವೆಂಕಟೇಶ್ ಅವರು 2,088 ಮತಗಳ ಅಂತರದಿಂದ ಗೆಲುವು ಸಾಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.