ADVERTISEMENT

‘ಪುಣ್ಯ, ನಲಪಾಡ್ ಪ್ರಕರಣದಲ್ಲೂ ಬಿಜೆಪಿ ಕೈವಾಡದ ಆರೋಪ ಮಾಡಿಲ್ಲ!’ ಸುರೇಶ್‌ ಕುಮಾರ್ ತಿರುಗೇಟು

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 7:18 IST
Last Updated 17 ಮಾರ್ಚ್ 2018, 7:18 IST
ಸುರೇಶ್‌ ಕುಮಾರ್ (ಸಂಗ್ರಹ ಚಿತ್ರ)
ಸುರೇಶ್‌ ಕುಮಾರ್ (ಸಂಗ್ರಹ ಚಿತ್ರ)   

ಬೆಂಗಳೂರು: ಶಾಂತಿನಗರದ ಶಾಸಕ ಹ್ಯಾರಿಸ್ ಮಗ ಮೊಹಮ್ಮದ್ ನಲಪಾಡ್ ಮತ್ತು ಸಹಚರರು ವಿದ್ವತ್ ಮೇಲೆ ಮಾಡಿರುವ ಹಲ್ಲೆಯಲ್ಲೂ ಬಿಜೆಪಿ ಕೈವಾಡ ಇದೆ ಎಂದು ಆರೋಪ ಮಾಡಿಲ್ಲವಲ್ಲ ಎಂಬುದಾಗಿ ಬಿಜೆಪಿಯ ಹಿರಿಯ ನಾಯಕ ಸುರೇಶ್‌ ಕುಮಾರ್ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕ, ಸಂಸದ ವೀರಪ್ಪ ಮೊಯಿಲಿ ಅವರ ಟ್ವೀಟ್ ವಿವಾದದಲ್ಲಿ ಬಿಜೆಪಿ ಕೈವಾಡ ಇದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಅವರ ಹೇಳಿಕೆಗೆ ಸುರೇಶ್‌ ಕುಮಾರ್ ಟ್ವಿಟರ್‌ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ವೀರಪ್ಪ ಮೊಯಿಲಿ ಅವರ ಟ್ವೀಟ್ ಹಿಂದೆ ಬಿಜೆಪಿ ಕೈವಾಡ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಆರೋಪ ಮಾಡಿದ್ದಾರೆ. ಪುಣ್ಯ, ನಲಪಾಡ್ ಗ್ಯಾಂಗ್ ವಿದ್ವತ್ ಮೇಲೆ ಮಾಡಿರುವ ದೌರ್ಜನ್ಯದ ಹಿಂದೆಯೂ, ಪೆಟ್ರೋಲ್ ನಾರಾಯಣಸ್ವಾಮಿ ‘‘ಸಾಧನೆ’’ಯ ಹಿಂದೆಯೂ ಬಿಜೆಪಿ ಕೈವಾಡ ಇದೆ ಎಂದು ಹೇಳಿಲ್ಲ!’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.