ವಿಜಯಪುರ/ ಹೊಸಪೇಟೆ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ತಾಸ್ಗಾಂವ್ ಹಾಗೂ ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಳಿ ಶನಿವಾರ ಬೆಳಿಗ್ಗೆ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 14 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 28 ಮಂದಿ ಗಾಯಗೊಂಡಿದ್ದಾರೆ.
ಕಲಬುರ್ಗಿ ಜಿಲ್ಲೆಯ ಶಹಬಾದ್ನಿಂದ ಪರ್ಸಿ ಕಲ್ಲು ತುಂಬಿಕೊಂಡು ಮಹಾರಾಷ್ಟ್ರದ ಕರಾಡಕ್ಕೆ ತೆರಳುತ್ತಿದ್ದ ಟ್ರಕ್ ಪಲ್ಟಿಯಾಗಿದ್ದರಿಂದ, ಕಲ್ಲಿನಡಿ ಸಿಲುಕಿದ 10 ಮಂದಿ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಲ್ಲಿ ವಿಜಯಪುರ ಜಿಲ್ಲೆಯ 8 ಮಂದಿ, ಬೀದರ್ ಹಾಗೂ ಕಲಬುರ್ಗಿ ಜಿಲ್ಲೆಯ ತಲಾ ಒಬ್ಬರು ಸೇರಿದ್ದಾರೆ.
ಹೊಸಪೇಟೆ ಬಳಿ ಪಾಪಿನಾಯಕನಹಳ್ಳಿ ಸಮೀಪದ ಬಳ್ಳಾರಿ ರಸ್ತೆಯಲ್ಲಿ ಬೆಳಗಿನ ಜಾವ ಲಾರಿಯೊಂದು ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ಮಹಿಳೆಯರು ಸೇರಿದಂತೆ ಕಾರಿನಲ್ಲಿದ್ದ ನಾಲ್ವರು ಅಸುನೀಗಿದ್ದಾರೆ. ಎಲ್ಲರೂ ಚಿತ್ರದುರ್ಗ ಜಿಲ್ಲೆಯವರು. ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೊಸಪೇಟೆಗೆ ಬರುತ್ತಿ
ದ್ದಾಗ ಈ ಅಪಘಾತ ಸಂಭವಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.