ADVERTISEMENT

‘ಬಸವಜಯಂತಿ ದಿನ ರಜೆ ಬೇಡ’

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2017, 19:56 IST
Last Updated 29 ಏಪ್ರಿಲ್ 2017, 19:56 IST

ಚಿತ್ರದುರ್ಗ: ‘ಜಗತ್ತಿಗೆ ಕಾಯತತ್ವ ಸಾರಿದ ಜಗಜ್ಯೋತಿ ಬಸವೇಶ್ವರರ ಜಯಂತಿ ದಿನ  ಸರ್ಕಾರ ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಕೊಡುವ ಅಗತ್ಯವಿಲ್ಲ’ ಎಂದು ಮುರುಘಾ ಮಠದ ಶಿವಮೂರ್ತಿ ಶರಣರು ಸರ್ಕಾರಕ್ಕೆ ಸಲಹೆ ನೀಡಿದರು.

ನಗರದ ಜೆಡಿಎಸ್ ಕಚೇರಿ ಆವರಣದಲ್ಲಿ ಶನಿವಾರ ಜಿಲ್ಲಾ ವೀರಶೈವ ಸಮಾಜದಿಂದ ಆಯೋಜಿಸಿದ್ದ ವಿಶ್ವಗುರು ಬಸವೇಶ್ವರ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಮುಂದಿನ ವರ್ಷದಿಂದ ಬಸವ ಜಯಂತಿ ದಿನ ನಮ್ಮ ಎಸ್‌ ಜೆ ಎಂ ವಿದ್ಯಾಪೀಠದ ಎಲ್ಲ ಶಿಕ್ಷಣ ಸಂಸ್ಥೆಗಳು ಹಾಗೂ ಕಚೇರಿಗಳೂ ಕಾರ್ಯನಿರ್ವಹಿಸಲಿವೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT