ADVERTISEMENT

ಬಸವಮೂರ್ತಿ ಲೋಕಾರ್ಪಣೆ ನಾಳೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2015, 20:08 IST
Last Updated 24 ಏಪ್ರಿಲ್ 2015, 20:08 IST

ಗದಗ: ನಗರದ ಭೀಷ್ಮಕೆರೆ ಆವರಣದಲ್ಲಿ ನಿರ್ಮಿಸಿರುವ 116.7 ಅಡಿ ಎತ್ತರದ ಬಸವೇಶ್ವರ ಮೂರ್ತಿ ಇದೇ 26ರಂದು ಲೋಕಾರ್ಪಣೆಗೊಳ್ಳಲಿದೆ.

ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅನುದಾನದಲ್ಲಿ ಒಟ್ಟು ₨ 7.64 ಕೋಟಿ ವೆಚ್ಚದಲ್ಲಿ ಲೋಕೋ ಪಯೋಗಿ ಇಲಾಖೆ ನಿರ್ವಹಣೆಯಲ್ಲಿ ಕಾಮಗಾರಿ ಪೂರ್ಣಗೊಂಡಿದೆ. 


ಪ್ರತಿಮೆ ಸುತ್ತಲಿನ ಎರಡು ಎಕರೆ ಪ್ರದೇಶದಲ್ಲಿ ಉದ್ಯಾನ ನಿರ್ಮಿಸಲಾಗಿದೆ. ಮೂರ್ತಿಯು ನಿಂತ ಭಂಗಿಯಲ್ಲಿ ವಚ ನದ ಕಟ್ಟುಗಳನ್ನು ಹಿಡಿದು ಸಮಾನತೆ, ಏಕತೆ ಸಂದೇಶ ಕೈ ಎತ್ತಿ ಹೇಳುವಂತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT