ಪುತ್ತೂರು: ಸಾಹಿತಿ ಡಾ. ಶಿವರಾಮ ಕಾರಂತರ ಹೆಸರಿನಲ್ಲಿ ನೀಡುತ್ತಿರುವ ‘ಬಾಲವನ’ ಪ್ರಶಸ್ತಿಗೆ ಹಿರಿಯ ಲೇಖಕಿ ವೈದೇಹಿ ಆಯ್ಕೆಯಾಗಿದ್ದಾರೆ.
ಪ್ರಶಸ್ತಿ ₹ 25 ಸಾವಿರ ನಗದು ಒಳಗೊಂಡಿದೆ. ಇದೇ 10ರಂದು ಇಲ್ಲಿನ ಪರ್ಲಡ್ಕದಲ್ಲಿರುವ ಬಾಲವನದ ಬಯಲು ರಂಗಮಂದಿರದಲ್ಲಿ ನಡೆಯುವ ಡಾ.ಶಿವರಾಮ ಕಾರಂತರ ಜನ್ಮದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬಾಲವನ ಸಮಿತಿಯ ಅಧ್ಯಕ್ಷರೂ ಆದ ಪುತ್ತೂರು ಉಪವಿಭಾಗಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.