ಸವದತ್ತಿ: ಇಲ್ಲಿಗೆ ಸಮೀಪದ ಏಣಗಿಯಲ್ಲಿ ಶುಕ್ರವಾರ ನಿಧನರಾದ ಹಿರಿಯ ರಂಗಕರ್ಮಿ ಏಣಗಿ ಬಾಳಪ್ಪ (103) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ನೆರವೇರಿತು.
ಮೊದಲ ಪತ್ನಿ ಸಾವಿತ್ರಮ್ಮ ಹಾಗೂ ಪುತ್ರ ನಟರಾಜ ಅವರ ಸಮಾಧಿ ಪಕ್ಕದಲ್ಲಿಯೇ ಬಾಳಪ್ಪ ಅವರನ್ನು ಮಣ್ಣು ಮಾಡಲಾಯಿತು. ಸಶಸ್ತ್ರ ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ, ಗೌರವ ಸಲ್ಲಿಸಿದರು.
ಎರಡನೇ ಪತ್ನಿ, ರಂಗ ಕಲಾವಿದೆ ಲಕ್ಷ್ಮೀಬಾಯಿ ಸೇರಿದಂತೆ ಅಪಾರ ಸಂಖ್ಯೆಯ ಬಂಧುಬಳಗ ಹಾಗೂ ರಂಗ ಕಲಾವಿದರು ಅಂತ್ಯಕ್ರಿಯೆ ವೇಳೆ ಹಾಜರಿದ್ದರು.
ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಸಚಿವೆ ಉಮಾಶ್ರೀ, ರಂಗಕಲಾವಿದೆ ಬಿ.ಜಯಶ್ರೀ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.