ಉಡುಪಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಸಂಸದೆ ಶೋಭಾ ಕರಂದ್ಲಾಜೆ ಅವರು ಆಕ್ಷೇಪಾರ್ಹ ರೀತಿಯಲ್ಲಿ ಜತೆಗಿರುವಂತೆ ಚಿತ್ರ ಸೃಷ್ಟಿಸಿ ಅದನ್ನು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಹಾಕಿದ ಆರೋಪದ ಮೇಲೆ ಬಿಜೆಪಿ ಮುಖಂಡರ ವಿರುದ್ಧವೇ ನಗರದ ಸೈಬರ್, ಆರ್ಥಿಕ ಅಪರಾಧ ಮತ್ತು ಮಾದಕ ವಸ್ತು ನಿಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಿ. ಕಿಶೋರ್ ಕುಮಾರ್, ಮುಖಂಡರಾದ ರಾಜೇಶ್ ಕಾವೇರಿ ಹಾಗೂ ರಾಜು ಪೂಜಾರಿ ಪ್ರಕರಣದ ಆರೋಪಿಗಳು. ಈ ಮೂವರೂ ಅಡ್ಮಿನ್ಗಳಾಗಿರುವ ‘ಬಿಜೆಪಿ ಕುಂದಾಪುರ’ ಎಂಬ ಗ್ರೂಪ್ನಲ್ಲಿ ಚಿತ್ರ ಹಾಗೂ ಅವಹೇಳನಕಾರಿ ಬರಹ ಹಾಕಲಾಗಿದೆ ಎಂದು ಸುರೇಶ್ ಶೆಟ್ಟಿ ಎಂಬುವರು ದೂರು ನೀಡಿದ್ದಾರೆ.
ಈ ಮೂರೂ ಮಂದಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿ ಟಿಕೆಟ್ ನೀಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.