ರಾಮನಗರ: ಬಿಬಿಎಂಪಿ ವತಿಯಿಂದ ಕಸಾಯಿ ಖಾನೆ ಆರಂಭ ವಿರೋಧಿಸಿ ಹಾರೋಹಳ್ಳಿಯಲ್ಲಿ ಶುಕ್ರವಾರ ಒಂದು ದಿನದ ಉಪವಾಸ ಸತ್ಯಾಗ್ರಹ ಆರಂಭ ವಾಗಿದೆ.
ರಾಮಚಂದ್ರಾಪುರ ಮಠದ ರಾಘವೇಂದ್ರ ಸ್ವಾಮೀಜಿ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸ್ವಾಮೀಜಿಗಳು, ನೂರಾರು ಜನರು ಭಾಗಿಯಾಗಿದ್ದಾರೆ.
ಕಸಾಯಿಖಾನೆ ನಿಂತರೆ ಹಾಲು ಕುಡಿಯುತ್ತೇವೆ. ಇಲ್ಲವಾದರೆ ಈ ಹೋರಾಟಕ್ಕಾಗಿ ನಮ್ಮ ರಕ್ತವನ್ನು ಚೆಲ್ಲುತ್ತೇವೆ ಎಂದು ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದರು.
ಮೊದಲು ಇಲ್ಲಿರುವ ಸಂತರ ಕಸಾಯಿ ಮಾಡಿ ನಂತರ ಗೋವುಗಳ ಕಸಾಯಿಖಾನೆ ತೆರೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
50ಕ್ಕೂ ಹೆಚ್ಚು ಸ್ವಾಮೀಜಿಗಳು, ಶಾಸಕ ಸಿ.ಟಿ. ರವಿ, ಪ್ರಮೋದ್ ಮುತಾಲಿಕ್ ಹಾಗೂ ಸ್ಥಳೀಯ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡರು. ಇದಕ್ಕೂ ಮುನ್ನ ಹಾರೋಹಳ್ಳಿಯಲ್ಲಿ ರಸ್ತೆ ತಡೆ, ಗೋವುಗಳ ಮೆರವಣಿಗೆ ನಡೆಯಿತು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.