ಬೆಳಗಾವಿ: ಡಾ. ಬೆಟಗೇರಿ ಕೃಷ್ಣಶರ್ಮ ಕಾವ್ಯ ಪ್ರಶಸ್ತಿಗೆ (2012) ಡಾ. ಎನ್.ಎಸ್.ಲಕ್ಷ್ಮಿನಾರಾಯಣ ಭಟ್ಟ ಮತ್ತು ಕಥಾ ಪ್ರಶಸ್ತಿಗೆ (2013) ಡಾ. ರಾಜಶೇಖರ ನೀರಮಾನ್ವಿ ಅವರು ಆಯ್ಕೆಯಾಗಿದ್ದಾರೆ.
ಎರಡೂ ಪ್ರಶಸ್ತಿಗಳು ತಲಾ ರೂ 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿವೆ. ಪ್ರಶಸ್ತಿ ಪ್ರದಾನ ಸಮಾರಂಭ ಇದೇ 31 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್ನ ಅಧ್ಯಕ್ಷ ಪ್ರೊ. ರಾಘವೇಂದ್ರ ಪಾಟೀಲ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.