ಮಂಗಳೂರು: ಮರೋಳಿಯಲ್ಲಿ ಶನಿವಾರ ರಾತ್ರಿ ಪ್ರತಾಪ್ ಪೂಜಾರಿ (26) ಎಂಬಾತನ ಕೊಲೆಯಾಗಿದೆ. ಸ್ನೇಹಿತರೇ ಈತನನ್ನು ಕೊಲೆ ಮಾಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.
ಪ್ರತಾಪ್ ಶನಿವಾರ ರಾತ್ರಿ ತನ್ನ ಸ್ನೇಹಿತ ರಕ್ಷಿತ ಶೆಟ್ಟಿ ಎಂಬುವರ ಮನೆಯಲ್ಲಿ ಜನ್ಮದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವ ವೇಳೆ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‘ಪ್ರತಾಪ್ ತಲೆ ಮತ್ತು ಎಡತೋಡೆಗೆ ತೀವ್ರ ಗಾಯಗಳಾಗಿದ್ದವು. ಪ್ರಾಥಮಿಕ ಹಂತದ ತನಿಖೆ ನಡೆಯುತ್ತಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು ಅವರನ್ನು ಬಂಧಿಸಲಾಗುವುದು’ ಎಂದು ಡಿಸಿಪಿಗಳಾದ ಶಾಂತರಾಜು ಮತ್ತು ಸಂಜೀವ ಪಾಟೀಲ ತಿಳಿಸಿದರು.
ಹಿಂದೂ ಜಾಗರಣ ವೇದಿಕೆ ನಂಟು?
ಕೊಲೆ ಮಾಡಿರುವ ಆರೋಪಿಗಳು ಹಾಗೂ ಪ್ರತಾಪ್ ಹಿಂದೂ ಜಾಗರಣ ವೇದಿಕೆಯಲ್ಲಿ ಸಕ್ರಿಯರಾಗಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಆದರೆ, ಈ ಮಾಹಿತಿಯನ್ನು ಪೊಲೀಸರು ಬಹಿರಂಗಗೊಳಿಸುತ್ತಿಲ್ಲ. ಪ್ರತಾಪ್ ಮತ್ತು ಕೊಲೆ ಆರೋಪಿಗಳು ಈ ಹಿಂದೆ ದರೋಡೆ ಪ್ರಕರಣದಲ್ಲಿ ಆರೋಪಿಗಳಾಗಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.