ADVERTISEMENT

ಮಕ್ಕಳನ್ನು ಸಾಯಿಸಿ ತಾಯಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2017, 17:12 IST
Last Updated 12 ಫೆಬ್ರುವರಿ 2017, 17:12 IST

ಚನ್ನಪಟ್ಟಣ: ತಾಯಿಯೊಬ್ಬಳು ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಗೆ ತಳ್ಳಿ ಸಾಯಿಸಿ ನಂತರ ತಾನೂ ತೊಟ್ಟಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಅಪ್ಪಗೆರೆ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ರೇಖಾ (26), ಮಗಳು ಮನ್ವಿತಾ(3) ಹಾಗೂ ಮಗ ನೂತನ್ (7) ಮೃತಪಟ್ಟವರು. ನವೀನ್ ಎಂಬುವರ ಪತ್ನಿಯಾದ ರೇಖಾ ಮೂಲತಃ ಮದ್ದೂರು ತಾಲ್ಲೂಕಿನ ಹನುಮಂತಪುರ ಗ್ರಾಮದವರು.

ನವೀನ್ ಎರಡು ತಿಂಗಳುಗಳಿಂದ ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ತಮಿಳುನಾಡಿನ ಕೃಷ್ಣಗಿರಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪತಿ ಬದುಕುಳಿಯುವುದಿಲ್ಲವೆಂದು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.