ಮೈಸೂರು: ಬೃಂದಾವನ ಬಡಾವಣೆಯ ನಿವಾಸಿ ಗಂಗಾಧರ್ (42) ಎಂಬುವರು ನೇಣು ಹಾಕಿಕೊಂಡು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಎಸ್ಸಿ ಓದುತ್ತಿರುವ ಪುತ್ರಿಯ ₹ 12,500 ಶುಲ್ಕ ಪಾವತಿಸಲು ಆಗದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಪುತ್ರಿ ಅಜ್ಜಿಯ ಮನೆಗೆ ಹೋಗಿದ್ದರು. ಪತ್ನಿ ಕೆಲ ವರ್ಷಗಳ ಹಿಂದೆ ಕೊನೆಯುಸಿರೆಳೆದಿದ್ದರು. ಏಕಾಂಗಿಯಾಗಿದ್ದ ಗಂಗಾಧರ್ ಅವರು ಗಣಪತಿ ದೇಗುಲದಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.