ADVERTISEMENT

ಮದ್ಯ ನಿಷೇಧ ಅಸಾಧ್ಯ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2017, 7:26 IST
Last Updated 21 ನವೆಂಬರ್ 2017, 7:26 IST
ಮದ್ಯ ನಿಷೇಧ ಅಸಾಧ್ಯ: ಸಿಎಂ ಸಿದ್ದರಾಮಯ್ಯ
ಮದ್ಯ ನಿಷೇಧ ಅಸಾಧ್ಯ: ಸಿಎಂ ಸಿದ್ದರಾಮಯ್ಯ   

ಬೆಳಗಾವಿ: ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸುವುದು ಅಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ವಿಧಾನಸಭೆಯಲ್ಲಿ ಪ್ರತಿಕ್ರಿಯಿಸಿದರು.

ಮದ್ಯ ಮಾರಾಟದ ಮೇಲೆ ಪೂರ್ಣ ನಿಷೇಧ ಹೇರುವ ಕುರಿತು ವಿರೋಧ ಪಕ್ಷ ಬಿಜೆಪಿ ಮುಂದಿಟ್ಟಿದ್ದ ಬೇಡಿಕೆಗೆ ಪ್ರತಿಕ್ರಿಯಿಸಿದ ಅವರು, ‘ಮದ್ಯ ನಿಷೇಧ ನಿರ್ಧಾರವು ಎಲ್ಲಿಯೂ ಯಶಸ್ವಿಯಾಗಿಲ್ಲ. ಗುಜರಾತನ್ನೇ ಗಮನಿಸಿ, ಅದೆಷ್ಟು ಪರಿಣಾಮಕಾರಿಯಾಗಿ ಮದ್ಯ ಮಾರಾಟದ ನಿಷೇಧ ಅನುಷ್ಟಾನಗೊಂಡಿದೆ ಎಂಬುದನ್ನೂ ಸ್ವತಃ ಪರಿಶೀಲಿಸಿ’ ಎಂದರು.

ಮದ್ಯ ನಿಷೇಧದ ಕುರಿತು ರಾಷ್ಟ್ರೀಯ ನೀತಿ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುವಂತೆ ಬಿಜೆಪಿಗೆ ಸಲಹೆ ನೀಡಿದರು. ‘ಈ ಕುರಿತು ರಾಷ್ಟ್ರೀಯ ನೀತಿ ರೂಪಿಸಿದರೆ, ಕರ್ನಾಟಕ ಅದನ್ನು ಬೆಂಬಿಸಲಿದೆ’ ಎಂದು ಹೇಳಿದರು.

ADVERTISEMENT

ಮದ್ಯ ಮಾರಾಟದಿಂದ ಸರ್ಕಾರಕ್ಕೆ ₹11,000 ಕೋಟಿ ಆದಾಯ ಗಳಿಕೆಯಾಗಿರುವುದಾಗಿ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ್‌ ವಿಧಾನಸಭೆಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.