ADVERTISEMENT

ಮಹಾದಾಯಿ: ನಾಲ್ಕು ಜಿಲ್ಲೆಗಳಲ್ಲಿ ಶಾಲೆ –ಕಾಲೇಜು ರಜೆ

ಬೆಂಗಳೂರಿನಲ್ಲಿ ಶಾಲೆ ಕಾಲೇಜಿಗೆ ರಜೆ ಇಲ್ಲ

​ಪ್ರಜಾವಾಣಿ ವಾರ್ತೆ
Published 27 ಜುಲೈ 2016, 17:00 IST
Last Updated 27 ಜುಲೈ 2016, 17:00 IST
ಮಹಾದಾಯಿ: ನಾಲ್ಕು ಜಿಲ್ಲೆಗಳಲ್ಲಿ ಶಾಲೆ –ಕಾಲೇಜು ರಜೆ
ಮಹಾದಾಯಿ: ನಾಲ್ಕು ಜಿಲ್ಲೆಗಳಲ್ಲಿ ಶಾಲೆ –ಕಾಲೇಜು ರಜೆ   

ಬೆಂಗಳೂರು: ಮಹಾದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ ರಾಜ್ಯ ರೈತ ಸಂಘವು ಗುರುವಾರ ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಬೆಳಗಾವಿ, ಧಾರವಾಡ, ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸ್ಥಳೀಯ ಪರಿಸ್ಥಿತಿ ನೋಡಿಕೊಂಡು ರಜೆ ನೀಡುವ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಕೆ.ಆನಂದ್ ಹೇಳಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳಿಗೆ ರಜೆ ನೀಡಿಲ್ಲ ಎಂದು ಜಿಲ್ಲಾಧಿಕಾರಿ ವಿ.ಶಂಕರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.